ಜಾಹೀರಾತಿನ ಮೂಲಕ ಉದ್ಯೋಗಕ್ಕಾಗಿ ಆನ್ ಲೈನ್ ನಲ್ಲಿ ಸಂಪರ್ಕ     ➤ 9.79 ಲಕ್ಷ ರೂ. ವಂಚನೆ…!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.21. ಜಾಹೀರಾತಿನ ಮೂಲಕ ಉದ್ಯೋಗಕ್ಕೆ ಸಂಪರ್ಕಿಸಿ ವೀರಕಂಭ ಗ್ರಾಮದ ನಿವಾಸಿಯೊಬ್ಬರು ಫೇಸ್‌ ಬುಕ್‌ನಲ್ಲಿ 9.79 ಲಕ್ಷ ರೂ. ಕಳೆದುಕೊಂಡ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ.

ವೀರಕಂಭ ಗ್ರಾಮದ ನಡಾಲು ರಾಜೇಶ್‌ ಆಳ್ವ ಎನ್‌. ವಂಚನೆಗೊಳಗಾದವರು ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಂಪೆನಿ ಯೊಂದರಲ್ಲಿ ಉದ್ಯೋಗದಲ್ಲಿದ್ದು, ಮನೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದರು. ಇಲ್ಲಿ ವೇತನ ಕಡಿಮೆಯಾದ ಹಿನ್ನೆಲೆಯಲ್ಲಿ ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತಿನಲ್ಲಿದ್ದ ವಾಟ್ಸ್‌ ಆ್ಯಪ್‌ ನಂಬರನ್ನು ಸಂಪರ್ಕಿಸಿ ಉದ್ಯೋಗ ವಿಚಾರಿಸಿದ್ದರು.

 

error: Content is protected !!
Scroll to Top