ಬಿರುಬಿಸಿಲಿಗೆ ಬಸವಳಿಯಲಿದೆ ಕರುನಾಡು; ದಿನೇ ದಿನೇ ತಾಪಮಾನ‌ ಏರಿಕೆ      ➤  ಮಾರ್ಚ್ ನಲ್ಲಿ ಭಾರೀ ಹೆಚ್ಚಳ ಸಾಧ್ಯತೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.24. ಭಾರೀ ಬಿಸಿಲಿನ ತಾಪಕ್ಕೆ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಮಾರ್ಚ್ ಮಧ್ಯಭಾಗದಲ್ಲಿ ರಾಜ್ಯದಲ್ಲಿ ಉಷ್ಣಾಂಶ ಅಧಿಕವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್‍ನಲ್ಲಿ ಹೆಚ್ಚಾಗುತ್ತಿದ್ದ ಉಷ್ಣಾಂಶ ಮಾರ್ಚ್ 3ನೇ ವಾರದಲ್ಲಿ ಅಧಿಕವಾಗಲಿದೆ. ಸಾಮಾನ್ಯವಾಗಿ ಮಾರ್ಚ್ ಬಳಿಕ ಬಿಸಿಲ ಬೇಗೆ ಹೆಚ್ಚಾಗುತ್ತಿತ್ತು ಆದರೆ, ಫೆಬ್ರವರಿ ಮಧ್ಯಭಾಗದಲ್ಲೇ ತಾಪಮಾನ ಹೆಚ್ಚಾಗುತ್ತಿದೆ. ಏಪ್ರಿಲ್ ಅಥವಾ 3ನೇ ವಾರದಲ್ಲಿ ಹೆಚ್ಚಾಗುತ್ತಿದ್ದ ಉಷ್ಣಾಂಶ ಮಾರ್ಚ್ 3ನೇ ವಾರದಲ್ಲಿ ಅಧಿಕವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

 

Scroll to Top