ಅಡಿಕೆ ಕೊಯ್ಯುವ ವೇಳೆ ಕೊಕ್ಕೆ ವಿದ್ಯುತ್ ತಂತಿಗೆ ತಗುಲಿ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com. ಕುಂದಾಪುರ, ಮಾ 3.  ಅಡಿಕೆ ಕೊಯ್ಯುವ ವೇಳೆ ಕಬ್ಬಿಣದ ಕೊಕ್ಕೆ ಹೈಟೆನ್ಯನ್ ವಯರ್ ನ ವಿದ್ಯುತ್ ತಂತಿಗೆ ತಾಗಿದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಾಡ ಗ್ರಾಮದ ಕೊನ್ಕೆಯ ಅಂಗಡಿ ಮನೆಯಲ್ಲಿ ಇಂದು ನಡೆದಿದೆ.

ಕೊನ್ಕೆಯ ಅಂಗಡಿ ಮನೆಯ ನಿವಾಸಿ ಭಜಂಗ ಶೆಟ್ಟಿ (59) ಸಾವನ್ನಪ್ಪಿದವರು. ತಮ್ಮದೇ ಮನೆಯ ತೋಟದಲ್ಲಿ ಅಡಿಕೆ ಕೊಯ್ಯುತ್ತಿದ್ದಾಗ ಈ ಅವಘಡ ಸಂಭವಿಸಿದೆ.

error: Content is protected !!

Join the Group

Join WhatsApp Group