‘ಲೋಕಾಯುಕ್ತ ಮರು ಸ್ಥಾಪಿಸಿದ್ದೇ ಭ್ರಷ್ಟಾಚಾರ ನಿಗ್ರಹಕ್ಕೆ’ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.04. ಭ್ರಷ್ಟಾಚಾರವನ್ನು ತಡೆಯುವುದಕ್ಕೆಂದೇ ನಾವು ಲೋಕಾಯುಕ್ತವನ್ನು ಮರು ಸ್ಥಾಪಿಸಿರುವುದು. ತಪ್ಪು ಮಾಡಿದವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಕಚೇರಿ ಮತ್ತು ನಿವಾಸದ ಲೋಕಾಯುಕ್ತ ದಾಳಿ ವೇಳೆ ಕೋಟ್ಯಾಂತರ ರೂಪಾಯಿ ನಗದು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ತಪ್ಪು ಮಾಡಿದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಕಾನೂನಿನ ಪ್ರಕಾರವೇ ಅವರಿಗೆ ಶಿಕ್ಷೆಯಾಗಲಿದೆ ಎಂದರು.

 

 

Scroll to Top