ಉಡುಪಿ: ಸುಸ್ಥಿತಿಯಲ್ಲಿದ್ದ ರಸ್ತೆಗೆ ಮತ್ತೆ ಕಾಂಕ್ರೀಟ್ ಕಾಮಗಾರಿ.!

(ನ್ಯೂಸ್ ಕಡಬ)newskadaba.com  ಉಡುಪಿ, ಮಾ.04. ಶಾರದಾ ಕಲ್ಯಾಣ ಮಂಟಪದಿಂದ ಬೀಡಿನಗುಡ್ಡೆ ಸಂಪರ್ಕಿಸುವ ಮುಖ್ಯ ಕಾಂಕ್ರೀಟ್ ರಸ್ತೆಯನ್ನು ಕಾಮಗಾರಿಯ ನೆಪದಲ್ಲಿ ಸುವ್ಯವಸ್ಥೆಯಲ್ಲಿದ್ದ ಉತ್ತಮ ಗುಣಮಟ್ಟದ ಕಾಂಕ್ರೀಟ್ ರಸ್ತೆಯನ್ನು ಅಗೆಯುತ್ತಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹತ್ತಿಂಚು ದಪ್ಪ, ಕಬ್ಬಿಣದ ಸರಳು ಅಳವಡಿಸಿ, ಕೆಲವು ಸಮಯದ ಹಿಂದೆ ಹೊಸದಾಗಿ ನಿರ್ಮಾಣ ಮಾಡಿರುವ ಕಾಂಕ್ರೀಟ್ ರಸ್ತೆ ಇದು. ಯಾವುದೇ ಹೊಂಡಗುಂಡಿಗಳಿಲ್ಲದೆ ಸುಸ್ಥಿತಿಯಲ್ಲಿತ್ತು, ಮತ್ತಷ್ಟು ವರ್ಷಗಳು ಬಾಳಿಕೆ ಬರುವ ರಸ್ತೆ ಇದಾಗಿತ್ತು.

 

Scroll to Top