ನಾಳೆ ಪ್ರಧಾನಿ ಮೋದಿ ಮಂಡ್ಯ, ಮದ್ದೂರು ಪ್ರವಾಸ ಹಿನ್ನೆಲೆ ➤ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್!

(ನ್ಯೂಸ್ ಕಡಬ) newskadaba.com.ಮಂಡ್ಯ, ಮಾ 11. ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಹಾಗೂ ಮದ್ದೂರು ಪ್ರವಾಸ ಹಿನ್ನಲೆ ಬೆಳಗ್ಗೆ 7 ಗಂಟೆಯಿಂದ ಬೆಂಗಳೂರು ರಾಷ್ಟ್ರೀಯಾ ಹೆದ್ದಾರಿ ಬಂದ್  ಆಗಲಿದ್ದು, ಸಾರ್ವಜನಿಕರ ಸುಗಮ ಪ್ರಯಾಣಕ್ಕಾಗಿ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿದೆ.

ಆದರೆ ಅಗತ್ಯ ಸೇವೆ ಮತ್ತು ಹಾಲಿನ ವಾಹನಗಳಿಗೆ 9 ಗಂಟೆಯವರೆಗೆ ಮಾತ್ರ ಸರ್ವಿಸ್ ರಸ್ತೆಯಲ್ಲಿ ಪ್ರವೇಶಕ್ಕೆ ಅವಕಾಶ ನೀಡಲಾಗಿದ್ದು, ಮದ್ದೂರಿನಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲು ತೆರಳುವ ವಾಹನಗಳಿಗೆ ಬೆಳಗ್ಗೆ 9.30ರ ವರೆಗೆ ಅವಕಾಶ ನೀಡಲಾಗುತ್ತಿದೆ. ಮಳವಳ್ಳಿ ಕಡೆಯಿಂದ ಬರುವ ವಾಹನಗಳು ಕೆ.ಎಂ ದೊಡ್ಡಿ- ಹುಣ್ಣನದೊಡ್ಡಿ ಬೋರಾಪುರ ಗೇಟ್ ಮಾರ್ಗವಾಗಿ ಮದ್ದೂರಿಗೆ ಬರಲು ಅವಕಾಶ ನೀಡಲಾಗುತ್ತಿದ್ದು, ಸಮಾವೇಶಕ್ಕೆ ಬರುವ ವಾಹನಗಳ ನಿಲುಗಡೆಗೆ ಸಮಾವೇಶದ ಸ್ಥಳವಾದ ಗೆಜ್ಜಲಗೆರೆ ಕಾಲೋನಿಯಿಂದ 4 ಕೀಲೋ ಮೀಟರ್ ದೂರದಲ್ಲಿ ಅವಕಾಶ ಕಲ್ಪಿಸಲಾಗಿದೆ.

error: Content is protected !!

Join the Group

Join WhatsApp Group