➤ಆಸ್ತಿಗಾಗಿ ತಂದೆಯನ್ನು ಕೊಂದ ಪಾಪಿ ಮಗ

ನ್ಯೂಸ್ ಕಡಬ) newskadaba.com. ಗೋರಖ್‌ಪುರ. ಮಾ 13. ಆಸ್ತಿವಿಚಾರಕ್ಕೆ  ವ್ಯಕ್ತಿಯೊಬ್ಬ ತನ್ನ 62 ವರ್ಷದ ತಂದೆಯನ್ನು ಕೊಂದಿರುವ  ಘಟನೆ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಮುರಳಿ ಧಾರ್ ಗುಪ್ತಾ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಸಂತೋಷ್ ಕುಮಾರ್ ಗುಪ್ತಾ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆರೋಪಿ ತನ್ನ ತಂದೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದಿದ್ದಾನೆ. ನಂತ್ರ, ದೇಹವನ್ನು ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿ ಮನೆಯ ಹಿಂದಿನ ರಸ್ತೆಯಲ್ಲಿ ಬಚ್ಚಿಟ್ಟಿದ್ದ.

ಆರೋಪಿಯ ಸಹೋದರ ಪ್ರಶಾಂತ್ ಗುಪ್ತಾ ಪೊಲೀಸರಿಗೆ ದೂರು ನೀಡಿದ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕುಟುಂಬದಲ್ಲಿನ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ.

error: Content is protected !!

Join the Group

Join WhatsApp Group