ಬೆಳ್ತಂಗಡಿ: ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 17.  ಬಾವಿಗೆ ಬಿದ್ದ ಕೊಡವನ್ನು ಮೇಲಕ್ಕೆತ್ತಲು ಬಾವಿಗೆ ಇಳಿದಿದ್ದ ವ್ಯಕ್ತಿಯೋರ್ವ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ವರದಿಯಾಗಿದೆ.

ಮೃತರನ್ನು ಪ್ರವೀಣ್ ಎಂದು ಗುರುತಿಸಲಾಗಿದೆ.  ಇವರು ವಸಂತಿ ಎಂಬವರ ಮನೆಯ ಬಾವಿಗೆ ಬಿದ್ದಿದ್ದ ಕೊಡವನ್ನು ಮೇಲಕ್ಕೆತ್ತಲೆಂದು ಹಗ್ಗದ ಸಹಾಯದಿಂದ ಇಳಿದು, ಬಳಿಕ ಕೊಡಪಾನವನ್ನು ಮೇಲಕ್ಕೆ ಕಳುಹಿಸಿದ್ದರು. ಬಳಿಕ ಅದೇ ಹಗ್ಗವನ್ನು ಬಳಸಿಕೊಂಡು ಅವರು ಮೇಲಕ್ಕೇರಲು ಪ್ರಯತ್ನಿಸಿದ್ದಾರೆ. ಆದರೆ, ಅರ್ಧಕ್ಕೆ ತಲುಪಿದ ವೇಳೆ ಕೈಜಾರಿ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ.

 

error: Content is protected !!

Join the Group

Join WhatsApp Group