ನಿಧಿಯಾಸೆಗೆ ಬಾಣಂತಿಯ ಭೀಕರ ಹತ್ಯೆ

(ನ್ಯೂಸ್ ಕಡಬ) newskadaba.com ಕೊಪ್ಪಳ, ಮಾ. 21. ನಿಧಿ ಆಸೆಗಾಗಿ ಒಂದೂವರೆ ತಿಂಗಳ ಬಾಣಂತಿಯ ಭೀಕರ ಹತ್ಯೆ ಮಾಡಿರುವ ಘಟನೆ ಕೊಪ್ಪಳ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಮಹಿಳೆಯನ್ನು ನೇತ್ರಾವತಿ(26) ಎಂದು ಗುರುತಿಸಲಾಗಿದೆ. ಮನೆಯ ಸ್ವಲ್ಪ ದೂರದಲ್ಲೇ ಬೆಂಕಿ ಹಚ್ಚಿ ನೇತ್ರಾವತಿ ಕೊಲೆ ಮಾಡಲಾಗಿದ್ದು, ನಿಧಿಗಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕೊಪ್ಪಳ ಗ್ರಾಮಾಂತರ ಪೊಲೀಸರು ಭೇಟಿ ನೀಟಿ ಪರಿಶೀಲನೆ ನಡೆಸಿದ್ದಾರೆ.

error: Content is protected !!

Join the Group

Join WhatsApp Group