ದುಷ್ಕರ್ಮಿಗಳಿಂದ ತೀವ್ರ ಇರಿತಕ್ಕೊಳಗಾಗಿದ್ದ ಬಶೀರ್ ಮೃತ್ಯು ► ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ನಡೆದಿದ್ದ ಕೊಲೆಯತ್ನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.07. ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ಕೊಟ್ಟಾರ ಚೌಕಿಯಲ್ಲಿ ಜನವರಿ 03 ರಂದು ರಾತ್ರಿ ದುಷ್ಕರ್ಮಿಗಳಿಂದ ಬರ್ಬರ ಹಲ್ಲೆಗೀಡಾಗಿ ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಆಕಾಶಭವನ ನಿವಾಸಿ ಬಶೀರ್ ಭಾನುವಾರದಂದು ಕೊನೆಯುಸಿರೆಳೆದರು.

ತನ್ನ ಫಾಸ್ಟ್ ಫುಡ್ ಅಂಗಡಿಯನ್ನು ಮುಚ್ಚುವಷ್ಟರಲ್ಲಿ ದುಷ್ಕರ್ಮಿಗಳು ತಲ್ವಾರು ದಾಳಿ ನಡೆಸಿದ ಪರಿಣಾಮ ಬಶೀರ್ ರವರು ಗಂಭೀರ ಗಾಯಗೊಂಡು ಬಿದ್ದಿದ್ದರು. ಅವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಭಾನುವಾರದಂದು ಕೊನೆಯುಸಿರೆಳೆದಿದ್ದಾರೆ‌.

Also Read  ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಕೊಯಿಲ ಪಶು ವೈದ್ಯಕೀಯ ಕಟ್ಟಡದ ಪರಿಸರ ► ಕಟ್ಟಡ ಕಾರ್ಮಿಕರ ಬಯಲು ಶೌಚದಿಂದ ದುರ್ನಾತ ಬೀರುತ್ತಿರುವ ಕೊಯಿಲ ಗುಡ್ಡೆ

error: Content is protected !!
Scroll to Top