ಮುಂದಿನ ಬಾರಿಯೂ ನಾನೇ ಸಿಎಂ ➤ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಮುಧೋಳ, ಮಾ. 22. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯಲಿದ್ದು, ಮುಂದಿನ ಬಾರಿಯೂ ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಇವರು ತಾಲೂಕು ಆಡಳಿತದ ನೂತನ ಕಟ್ಟಡ, ಮಂಟೂರು ಮಹಾಲಕ್ಷ್ಮೀ ಏತ ನೀರಾವರಿ ಯೋಜನೆ ಸೇರಿ ವಿವಿಧ 13 ಕಾಮಗಾರಿಗಳ ಉದ್ಘಾಟನೆ ಹಾಗೂ 50 ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಬಾಗಲಕೋಟೆ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದ್ದೇನೆ. ಮುರುಗೇಶ್ ನಿರಾಣಿ ಮಾತ್ರ ಅವರ ಕ್ಷೇತ್ರಕ್ಕೆ ಕರೆದಿಲ್ಲ. ಮುಂದಿನ ಬಾರಿ ಮತ್ತೆ ನಾನೇ ಮುಖ್ಯಮಂತ್ರಿಯಾಗಿ ನಿನ್ನ ಕ್ಷೇತ್ರಕ್ಕೆ ಭೇಟಿ ಕೊಡುತ್ತೇನೆಂದು ‘ಮತ್ತೊಮ್ಮೆ ನಾನೇ ಸಿಎಂ’ ಎಂಬ ಆಸೆಯನ್ನು ವೇದಿಕೆ ಮೇಲೆ ಬಿಚ್ಚಿಟ್ಟಿದ್ದಾರೆ.

Also Read  ಮಂಗಳೂರು: ಲಘು ಭೂಕಂಪನದ ಅನುಭವ

error: Content is protected !!
Scroll to Top