ದ.ಕ.ದಲ್ಲಿ ಹೊಸ ಮುಖಗಳಿಗೆ ಅವಕಾಶ..!  ➤ ಮಾಜಿ ಪೊಲೀಸ್‌ ಅಧಿಕಾರಿ ಪುತ್ರನಿಗೆ ಕೈ ಟಿಕೆಟ್‌

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.25. ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬಿಡುಗಡೆಯಾಗಿದ್ದು, ಬಿಜೆಪಿ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಕೆಲವು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ.

ಎಂಟು ಕ್ಷೇತ್ರಗಳ ಪೈಕಿ ಐದು ಕಡೆ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ. ಕಾಂಗ್ರೆಸ್‌ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್‌ ಸಹೋದರ ಬಿಕೆ ಶಿವರಾಂ ಪುತ್ರ ರಕ್ಷಿತ್‌ ಶಿವರಾಂಗೆ ಬೆಳ್ತಂಗಡಿಯಲ್ಲಿ ಟಿಕೆಟ್ ನೀಡಲಾಗಿದೆ. ಸುಳ್ಯ ಮೀಸಲು ಕ್ಷೇತ್ರದಲ್ಲಿ ಕೃಷ್ಣಪ್ಪ ಜಿ ಘೋಷಿಸಲಾಗಿದೆ.

Scroll to Top