ದೀಪಕ್ ನಿವಾಸಕ್ಕೆ ತೆರಳಿದ ಬೆನ್ನಲ್ಲೇ ಬಶೀರ್ ಮನೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.07. ನಾಲ್ಕು ದಿನಗಳ ಹಿಂದೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಇಂದು ಮೃತಪಟ್ಟ ಬಶೀರ್ ಅವರ ಮಂಗಳೂರಿನ ಆಕಾಶಭವನದಲ್ಲಿರುವ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ರಾತ್ರಿ ಭೇಟಿ ನೀಡಿ ಸಾಂತ್ವನ ಹೇಳಿದರು.

ಬಶೀರ್ ರವರ ಪುತ್ರರಿಗೆ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಕರಣವನ್ನು ಗಂಭೀರವಾಗಿ ತನಿಖೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಿದರು. ಈ ಸಂದರ್ಭ ಸಚಿವರಾದ ರಮಾನಾಥ ರೈ, ಯು.ಟಿ. ಖಾದರ್, ಶಾಸಕ ಮೊಯ್ದಿನ್ ಬಾವ, ಮೇಯರ್ ಕವಿತಾ ಸನಿಲ್ ಮೊದಲಾದವರು ಜೊತೆಗಿದ್ದರು.

error: Content is protected !!

Join the Group

Join WhatsApp Group