ಪ್ರಜಾಧ್ವನಿ ಯಾತ್ರೆಯಲ್ಲಿ ಹಣ ಎಸೆದ ಆರೋಪ  ➤ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲು

(ನ್ಯೂಸ್ ಕಡಬ)newskadaba.com ಮಂಡ್ಯ, ಮಾ.30. ಮಂಡ್ಯ ಜಿಲ್ಲೆಯಲ್ಲಿ ಪ್ರಚಾರದ ವೇಳೆ ಜನರ ಮೇಲೆ ಹಣ ಎಸೆದ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸ್ಥಳೀಯ ಚುನಾವಣಾಧಿಕಾರಿಯೊಬ್ಬರು ಡಿ. ಕೆ ಶಿವಕುಮಾರ್ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 155 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಚಾರದ ವೇಳೆ ನಗದು ಎಸೆದಿದ್ದಾರೆ ಎಂಬ ಮಾಧ್ಯಮ ವರದಿಗಳ ಆಧಾರದ ಮೇಲೆ ಲಿಖಿತ ದೂರು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

Also Read  ಪಂಜ : ಇಮ್ಯೂನಿಟಿ ಬೂಸ್ಟರ್ ಮಾತ್ರೆಗಳನ್ನು ವಿತರಿಸಿ ಹುಟ್ಟುಹಬ್ಬ ಆಚರಣೆ

 

 

error: Content is protected !!
Scroll to Top