ಡಿ.ಕೆ.ಶಿವಕುಮಾರ್ ‘ಮುಖ್ಯಮಂತ್ರಿ’ಯಾಗಲು ಹೈಕಮಾಂಡ್ ಒಪ್ಪಲ್ಲ  – ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ.!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ. 04. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಆಗಲು ಹೈಕಮಾಂಡ್ ಒಪ್ಪುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯರ ಈ ಹೇಳಿಕೆಯು ರಾಜ್ಯ ಕಾಂಗ್ರೆಸ್ ನಲ್ಲಿ ಕೋಲಾಹಲ ಸೃಷ್ಟಿಸಿದೆ.

ಈ ಕುರಿತು ಖಾಸಗಿ ಸುದ್ದಿವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಡಿಕೆಶಿ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಹೈಕಮಾಂಡ್ ಒಪ್ಪುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ನಾನು ಡಿ.ಕೆ. ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು. ಇದು ನನ್ನ ಸಾರ್ವಜನಿಕ ಜೀವನದ ಕೊನೇ ಚುನಾವಣೆ. ಹೀಗಾಗಿ ಡಿ.ಕೆ. ಶಿವಕುಮಾರ್ ಗೆ ಮುಖ್ಯಮಂತ್ರಿಯಾಗಲು ಹೈಕಮಾಂಡ್ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

 

error: Content is protected !!

Join the Group

Join WhatsApp Group