ರೇಗಿಸಿದ ಯುವಕನಿಗೆ ಚಪ್ಪಲಿಯೇಟು ನೀಡಿದ ಯುವತಿ

(ನ್ಯೂಸ್ ಕಡಬ)newskadaba.com  ಹಾಸನ, ಏ.04. ನಗರದಲ್ಲಿ ಪುಂಡರ ಹಾವಳಿ ಹೆಚ್ಚಾಗುತ್ತಿದೆ ಎಂಬ ಆರೋಪದ ನಡುವೆ, ರೇಗಿಸಿದ ಯುವಕನಿಗೆ ಧರ್ಮದೇಟು ನೀಡಿ ಯುವತಿಯೊಬ್ಬಳು ತಕ್ಕಶಾಸ್ತಿ ಮಾಡಿದ್ದಾಳೆ. ಹಾಸನ ನಗರದ ಸರ್ಕಾರಿ ಆಸ್ಪತ್ರೆ ಮುಂಭಾಗ ಈ ಘಟನೆ ನಡೆದಿದೆ.

ಸರ್ಕಾರಿ ಆಸ್ಪತ್ರೆಯ ಮುಂಭಾಗ ಯುವಕ ಚುಡಾಯಿಸಿದ್ದಾನೆ. ಇದರಿಂದ ಸಿಟ್ಟಾದ ಯುವತಿ, ಚಪ್ಪಲಿಯಿಂದ ಹೊಡೆದಿದ್ದಾಳೆ. ಯುವಕ ರೇಗಿಸಿದ್ದಲ್ಲದೆ, ಯುವತಿಯ ಮೇಲೆ ಕೈ ಮಾಡಿದ್ದಾನೆ. ಕೂಡಲೇ ಎಚ್ಚೆತ್ತ ಸ್ಥಳೀಯರು ಯುವಕನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ನಗರ ಠಾಣೆಗೆ ಕರೆದೊಯ್ದು, ನಂತರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮ ➤ ಅನುಪಯುಕ್ತ ಪೀಠೋಪಕರಣಗಳ ವಿಲೇವಾರಿ

 

 

error: Content is protected !!
Scroll to Top