(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಏ.06 ಆಕೆ ಮದುವೆಯಾಗಿದ್ದರೂ ಗಂಡನಿಂದ ದೂರವಾಗಿ ಇನ್ನೊಬ್ಬನ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ಸಂಬಂಧ ಅದೆಷ್ಟೇ ಗಟ್ಟಿಯಾಗಿದ್ರೂ ಅನೈತಿಕವಾಗಿದ್ರೆ, ಅಂತ್ಯವಾಗೋದು ದುರಂತದಲ್ಲೇ ಎಂಬುದಕ್ಕೆ ಈ ಘಟನೆ ತಾಜಾ ಉದಾಹರಣೆಯಾಗಿದೆ.
ಆನೇಕಲ್ ತಾಲೂಕಿನ ಹೆಬ್ಬಗೋಡಿ ವ್ಯಾಪ್ತಿಯ ಸಿಂಗೇನ ಅಗ್ರಹಾರ ನಿರ್ಜನ ಪ್ರದೇಶದಲ್ಲಿ ಮಹಿಳೆಯ ಸುಟ್ಟ ದೇಹವೊಂದು ಕೆಲ ದಿನಗಳ ಹಿಂದೆ ಪತ್ತೆಯಾಗಿತ್ತು. ಮಹಿಳೆಯೊಬ್ಬಳ ಹುಡುಕಾಟದಲ್ಲಿದ್ದ ಹೆಬ್ಬಗೋಡಿ ಪೊಲೀಸರು ಈ ದೇಹ ಅವಳದ್ದೇನಾ ಅಂತ ಅವಳ ಸಂಬಂಧಿಕರಿಗೆ ಕರೆದುಕೊಂಡು ಬಂದಾಗ ಪೊಲೀಸರಿಗೆ ಇದ್ದ ಶಂಕೆ ನಿಜವಾಯಿತು.
Also Read ಕಡಬ ಪಿಲ್ಯ ಫ್ಯಾಷನ್ ಇನ್ಸ್ಟಾಗ್ರಾಂ GIVEAWAY ಕಾರ್ಯಕ್ರಮ - ಸ್ಮಾರ್ಟ್ ಫೋನ್ ಗೆದ್ದ 10 ನೇ ತರಗತಿಯ ಬಾಲಕ