ಪಡುಬಿದ್ರಿ: ಪಿಕಪ್ ಮತ್ತು ಸ್ಕೂಟರ್ ನಡುವೆ ಅಪಘಾತ.! ➤ ಸವಾರ ಗಂಭೀರ

(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಏ.11. ಪಡುಬದ್ರಿ ಸೇತುವೆ ಬಳಿ ಸ್ಕೂಟರ್’ವೊಂದಕ್ಕೆ ಪಿಕಪ್ ಢಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಪಲಿಮಾರು ಶಾಂಭವಿ ಕಂಪೌಂಡು ನಿವಾಸಿ ವಿಜಯ ಪೂಜಾರಿ(68) ಗಾಯಗೊಂಡವರಾಗಿದ್ದಾರೆ ಎಂದು ವರದಿ ತಿಳಿಸಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ವಿಜಯ್ ಪೂಜಾರಿ ನಿವೃತ್ತ ಸರಕಾರಿ ಉದ್ಯೋಗಿಯಾಗಿದ್ದರು. ಉಡುಪಿಯಿಂದ ಮನೆಗೆ ಬರುತ್ತಿದ್ದ ಇವರು ಸೇತುವೆ ಬಳಿ ಬರುತ್ತಿರುವ ಸಂದರ್ಭ ಅದೇ ಕಡೆಯಿಂದ ಬಂದ ಪಿಕಪ್ ಡಿಕ್ಕಿಯಾಗಿದೆ. ಸವಾರ ಎಸೆಯಲ್ಪಟ್ಟರೆ ಸ್ಕೂಟರ್ ಪಿಕಪ್ ನಡಿಯಲ್ಲಿ ಸಿಲುಕಿಕೊಂಡಿದೆ ಎನ್ನಲಾಗಿದೆ.

Also Read  ಕೇಂದ್ರದ ಅಡಿಕೆ‌ ನಿಷೇಧ ಹೇಳಿಕೆಯನ್ನು ಕರಾವಳಿಗೆ ಆಗಮಿಸುತ್ತಿರುವ ಅಮಿತ್ ಷಾರಲ್ಲಿ ಪಕ್ಷ ಭೇದ ಮರೆತು ಪ್ರಶ್ನಿಸಬೇಕಿದೆ: ವೆಂಕಪ್ಪ ಗೌಡ ► ಕಡಬದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಪಕೋಡಾ ತಯಾರಿ ಅಣಕು ಪ್ರದರ್ಶಿಸಿ ಪ್ರತಿಭಟನೆ

error: Content is protected !!
Scroll to Top