ಉಡುಪಿ: ‘ಪಕ್ಷ ನನ್ನನ್ನು ನಡೆಸಿಕೊಂಡ ರೀತಿಗೆ ನೋವಾಗಿದೆ’ ➤ ರಘುಪತಿ ಭಟ್

(ನ್ಯೂಸ್ ಕಡಬ)newskadaba.com ಉಡುಪಿ, ಏ.12. “ಟಿಕೆಟ್ ತಪ್ಪಿರುವುದಕ್ಕೆ ಬೇಸರವಿಲ್ಲ, ಆದರೆ ಪಕ್ಷ ನನ್ನನ್ನು ನಡೆಸಿಕೊಂಡ ರೀತಿಯಿಂದ ನನಗೆ ನೋವಾಗಿದೆ” ಎಂದು ಶಾಸಕ ಕೆ. ರಘುಪತಿ ಭಟ್ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.


ಶಾಸಕ ಕೆ. ರಘುಪತಿ ಭಟ್ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅವರ ಮನೆ ಮುಂದೆ ನೂರಾರು ಸಂಖ್ಯೆಯ ಕಾರ್ಯಕರ್ತರು ಸೇರಿದ್ದು, ಮಾಧ್ಯಮದೊಂದಿಗೆ ಮಾತನಾಡಿ, “ಪಕ್ಷ ನನ್ನನ್ನು ನಡೆಸಿಕೊಂಡ ರೀತಿಯಿಂದ ನೋವಾಗಿದೆ. ಯಾವೊಬ್ಬ ನಾಯಕರೂ ನನಗೆ ಕಾಲ್ ಮಾಡಿ ಮಾತನಾಡಿಲ್ಲ. ಒಬ್ಬ ಜಿಲ್ಲಾಧ್ಯಕ್ಷರೂ ನನಗೆ ಕರೆ ಮಾಡಿ ತಿಳಿಸಿಲ್ಲ.

Scroll to Top