‘ಬಹುಮತದೊಂದಿಗೆ ಅಧಿಕಾರ ಬರುವ ವಿಶ್ವಾಸ ಇದೆ’..! ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.12. ರಾಜ್ಯದ 189 ಸ್ಥಳಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಿದ್ದು, ಎಲ್ಲರೂ ಬಹುಮತದಿಂದ ಆಯ್ಕೆಯಾಗಿ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಒಮ್ಮತದ ಸ್ವಾಗತ ದೊರೆತಿದೆ. ಕೆಲವು ಅಸಮಧಾನಿತರ ಜೊತೆ ಮಾತಾಡುವ ಕೆಲಸ ನಡೆದಿದೆ. ಲಕ್ಷ್ಮಣ ಸವದಿ ಅವರೊಂದಿಗೆ ಮಾತಾಡಿದ್ದು, ಯಾವುದೇ ದುಡುಕಿನ ನಿರ್ಧಾರ ಕೈಗೊಳ್ಳಬಾರದು ಎಂದು ತಿಳಿಸಿರುವುದಾಗಿ ಹೇಳಿದರು.

Scroll to Top