ಯುವಕನನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿ ಹತ್ಯೆ

(ನ್ಯೂಸ್ ಕಡಬ)newskadaba.com ಉತ್ತರಪ್ರದೇಶ, ಏ.13. ಕಳ್ಳತನದ ಶಂಕೆಯಲ್ಲಿ ಯುವಕನನ್ನು ಕಬ್ಬಿಣದ ಕಂಬಕ್ಕೆ ಕಟ್ಟಿಹಾಕಿ ಥಳಿಸಿ ಹತ್ಯೆ ಮಾಡಿದ ಅಮಾನವೀಯ ಘಟನೆ ಉತ್ತರಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ಶಿವಂ ಜೋಹ್ರಿ ಎಂಬ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿದ್ದು, ವ್ಯಕ್ತಿಯೊಬ್ಬ ಶಿವಂನನ್ನು ಕಬ್ಬಿಣದ ರಾಡ್‌ನಿಂದ ಮನಬಂದಂತೆ ಹೊಡೆಯುತ್ತಿರುವ ಮತ್ತು ಇತರರು‌ ನಿಂದಿಸುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಶಿವಂಗೆ ಕೊಲೆ‌ ಮಾಡಿ ಬಳಿಕ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಬಗ್ಗೆ ಹೇಳಲಾಗಿತ್ತು. ಆದರೆ ಪೊಲೀಸರಿಗೆ ಸಂಶಯ ಬಂದು ತನಿಖೆ ನಡೆಸಿದಾಗ ಥಳಿಸಿ ಹತ್ಯೆ ಮಾಡಿರುವುದು ತಿಳಿದು ಬಂದಿದೆ.

Also Read  ಶಕ್ತಿ ಶಿಕ್ಷಣ ಸಂಸ್ಥೆಯಿಂದಗುರುವಂದನೆ ➤ 2019 ಕಾರ್ಯಕ್ರಮ

 

 

error: Content is protected !!
Scroll to Top