ಕೇಂದ್ರ ಸರ್ಕಾರ ಸಮಾನ ನಾಗರಿಕ ಸಂಹಿತೆ ಜಾರಿಗೆ ಸಿದ್ಧತೆ..!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.19  ಕೇಂದ್ರ ಸರ್ಕಾರ ಸಮಾನ ನಾಗರಿಕ ಸಂಹಿತೆ ಜಾರಿಗೆ ಸಿದ್ಧತೆ ನಡೆಸಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ.

2024ರ ಸಾರ್ವತ್ರಿಕ ಚುನಾವಣೆ ಮೇಲೆ ಕಣ್ಣಿಟ್ಟ ಕೇಂದ್ರ ಸರ್ಕಾರ ಮುಂದಿನ ಮುಂಗಾರು ಸಂಸತ್ ಅಧಿವೇಶನದಲ್ಲಿ ಮಹತ್ವಾಕಾಂಕ್ಷಿಯ ಸಮಾನ ನಾಗರಿಕ ಸಂಹಿತೆ ವಿಧೇಯಕ ಮಂಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ನಮ್ಮ ಸರ್ಕಾರ ಸಮಾನ ನಾಗರಿಕ ಸಂಹಿತೆ ಜಾರಿಗೆ ಬದ್ಧವಾಗಿದ್ದು, ಅದಕ್ಕೆ ಸೂಕ್ತ ಸಮಯ ಬರಬೇಕು. ಎಲ್ಲಾ ಪ್ರಜಾಸತ್ತಾತ್ಮಕ ಪ್ರಕ್ರಿಯೆ ಅನುಸರಿಸಿ ಸಮಾನ ನಾಗರೀಕ ಸಂಹಿತೆ ಜಾರಿಗೊಳಿಸುವುದಾಗಿ ಕಳೆದ ವರ್ಷ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು.

 

 

 

 

 

 

Scroll to Top