ಮಂಗಳೂರು: ಹೂಡಿಕೆ ಮಾಡಿಸಿಕೊಂಡು ವಂಚನೆ   ➤ 10.25 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.20. ಅಧಿಕ ಲಾಭ ಗಳಿಸುವ ಉದ್ದೇಶದಿಂದ ತಾನು ಆ್ಯಪ್ ಒಂದರಲ್ಲಿ ಹಣ ಹೂಡಿಕೆ ಮಾಡಿ ಬಳಿಕ 10.25 ಲಕ್ಷ ರೂ.ವನ್ನು ಕಳೆದುಕೊಂಡಿರುವುದಾಗಿ ವ್ಯಕ್ತಿಯೊಬ್ಬರು ಮಂಗಳೂರು ಸೆನ್ ಠಾಣೆಗೆ ದೂರು ನೀಡಿದ್ದಾರೆ.

ದೂರು ದಾರರು ಕಳೆದ ವರ್ಷ ಇನ್ಸ್ಸ್ಟಾಗ್ರಾಮ್ ಖಾತೆ ಪರಿಶೀಲನೆ ಮಾಡುತ್ತಿದ್ದಾಗ, ಕ್ರಿಕೆಟಿಗ ಸುರೇಶ್ ರೈನಾ ಬ್ರಾಂಡ್ ಅಂಬಾಸೆಡರ್ ಆಗಿದ್ದ ಆ್ಯಪ್ ನೋಡಿದ್ದರು. ಅದರಲ್ಲಿ ಹಣ ಹೂಡಿಕೆಯಿಂದ ಲಾಭಗಳಿಸಬಹುದು ಎಂದು ಪ್ರಚಾರ ಮಾಡಿರುವುದು ಕಂಡು ಬಂದಿದೆ ಎನ್ನಲಾಗಿದೆ.

Also Read  ಬಿಜೆಪಿ ನಾಯಕನನ್ನು ಗುಂಡಿಟ್ಟು ಹತ್ಯೆ ಮಾಡಿದ ದುಷ್ಕರ್ಮಿಗಳು..!

 

error: Content is protected !!
Scroll to Top