ಗೃಹ ಸಚಿವ ಆರಗ ಜ್ಞಾನೇಂದ್ರ ಆಸ್ತಿಯಲ್ಲಿ ಬಿಡಿಎ ನಿವೇಶನ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.20 ಸುಪ್ರೀಂ ಕೋರ್ಟ್‌ ಆದೇಶದಂತೆ ಹಂಚಿಕೆ ರದ್ದುಪಡಿಸಿ, ಬಿಡಿಎ ವಶಕ್ಕೆ ಸ್ವತ್ತನ್ನು ಹಿಂಪಡೆಯಲು ಪ್ರಕ್ರಿಯೆ ಆರಂಭಿಸಿರುವ ವಿವಾದಿತ ನಿವೇಶನವನ್ನೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಮ್ಮ ಆಸ್ತಿ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ.

ಗೃಹ ಸಚಿವರಿಗೆ ನೋಟಿಸ್‌ ಜಾರಿ ಮಾಡಿದ್ದ ಬಿಡಿಎ, ಸ್ವತ್ತನ್ನು ಪ್ರಾಧಿಕಾರದ ವಶಕ್ಕೆ ಮರಳಿಸುವಂತೆ ಸೂಚಿಸಿತ್ತು. ಬಳಿಕ ಮನವಿಯೊಂದನ್ನು ಸಲ್ಲಿಸಿದ್ದ ಸಚಿವರು, ‘ಬಿಡಿಎ ತಪ್ಪಿನಿಂದಲೇ ಸಮಸ್ಯೆ ಉದ್ಭವಿಸಿದೆ. ನನಗೆ ಬೇರೊಂದು ನಿವೇಶನ ಮಂಜೂರು ಮಾಡಿ’ ಎಂದು ಕೋರಿದ್ದರು.

 

Scroll to Top