ರಾಮಕಥಾ ಗಾಯಕಿ ಅತ್ಯಾಚಾರ ಪ್ರಕರಣ       ➤ ಪ್ರಭಾಕರ ಭಟ್ ವಿರುದ್ಧದ ದೋಷಾರೋಪ ಪಟ್ಟಿ ರದ್ದು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.21. ರಾಮಕಥಾ ಗಾಯಕಿ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ರಾಘವೇಶ್ವರ ಭಾರತೀ ಸ್ವಾಮೀಜಿ ಪರ ವಹಿಸುವಂತೆ ಸಂತ್ರಸ್ತೆಯ ಪತಿಯ ಸಹೋದರ ಶ್ಯಾಮ್ ಪ್ರಸಾದ್ ಶಾಸ್ತ್ರಿಗೆ ಒತ್ತಡ ಹೇರಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಪ್ರಕರಣದಲ್ಲಿ ಆರೋಪಿತರ ವಿರುದ್ಧದ ದೋಷಾರೋಪ ಪಟ್ಟಿಯನ್ನು ಹೈಕೋರ್ಟ್​ ರದ್ದುಪಡಿಸಿದೆ.

ಈ ಪ್ರಕರಣದಲ್ಲಿ ಹೊಸನಗರ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಶ್ರೀಗಳು ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಿಸಲಾಗಿದ್ದ ದೋಷಾರೋಪ ಪಟ್ಟಿಯನ್ನು ಕೋರ್ಟ್​ ರದ್ದು ಮಾಡಿದೆ.

Scroll to Top