ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಸವಾರರಿಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಮಂಡ್ಯ, ಏ.23. ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಮಳವಳ್ಳಿ ತಾಲೂಕಿನ ಸರಗೂರು ಬಳಿಯ ಟಿ.ನರಸೀಪುರ-ಬೆಳಕವಾಡಿ ರಸ್ತೆಯಲ್ಲಿ ನಡೆದಿದೆ.

ಗ್ರಾಮದ ಶಿವಪ್ಪ(52), ಸತೀಶ್ (46) ಸಾವನ್ದನಪ್ಪಿದ್ದಾರೆ ಅಪಘಾತದ ರಸಭಕ್ಕೆ ಬೈಕ್​ ಸ್ಥಳದಲ್ಲೇ ಹೊತ್ತಿ ಉರಿದಿದೆ. ಸಂಬಂಧಿಕರ ಮದುವೆಗೆಂದು ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಸರಗೂರು ಬಳಿ ಎದುರಿನಿಂದ ಬರುತ್ತಿದ್ದ ಕಾರಿಗೆ ಬೈಕ್​ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

 

error: Content is protected !!

Join the Group

Join WhatsApp Group