(ನ್ಯೂಸ್ ಕಡಬ)Newskadaba.com ತುಮಕೂರು, ಏ.23 ತುಮಕೂರಿನ ಸಿದ್ದಗಂಗಾ ಮಠದ ಉತ್ತರಾಧಿಕಾರಿ ಪಟ್ಟಾಭಿಷೇಕ ಕಾರ್ಯಕ್ರಮ ಏ.23(ಇಂದು) ನಡೆಯಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ನಡೆಯಲಿದೆ.
ತುಮಕೂರಿನ ಸಿದ್ದಗಂಗಾ ಮಠಕ್ಕೆ ಉತ್ತರಾಧಿಕಾರಿ ನೇಮಕ ಮಾಡಲಾಗಿದ್ದು, ಮನೋಜ್ ಕುಮಾರ್ ರವರನ್ನು ಉತ್ತರ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.
ನಮ್ಮ ಶಾಖಾ ಮಠವಾದ ಬಂಡೇಮಠಕ್ಕೆ ಹರ್ಷ ಕೆ.ಎಂ., ಬೆಂಗಳೂರು ಗ್ರಾಮಾಂತರದ ವಿಜಯಪುರದ ಬಸವಕಲ್ಯಾಣ ಮಠಕ್ಕೆ ಗೌರೀಶ್ ಕುಮಾರ್ ಅವರನ್ನು ಉತ್ತರಾಧಿಕಾರಿಯಾಗಿ ಶಿವಾನುಭವ ಆಯ್ಕೆ ಮಾಡಲಾಗಿದ್ದು, ಮೂವರಿಗೂ ಪಟ್ಟಾಭಿಷೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದಲಿಂಗ ಶ್ರೀ ಹೇಳಿದ್ದಾರೆ.








