ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ, ಮುಸ್ಲಿಮರಿಗೆ ಮತ್ತೆ ಮೀಸಲಾತಿ..! ➤ಜತೆಗೆ  ರಾಜ್ಯದಲ್ಲಿ Amul ಹಾಲಿಗೆ ಕಡಿವಾಣ.!

(ನ್ಯೂಸ್ ಕಡಬ)Newskadaba.com ಬೆಂಗಳೂರು, ಏ.23 ಕರ್ನಾಟಕದಲ್ಲಿ ನಾನು ಮುಖ್ಯಮಂತ್ರಿಯಾದರೆ ಮುಸ್ಲಿಮರಿಗೆ ಮತ್ತೆ ಶೇ.4ರ ಮೀಸಲಾತಿ ನೀಡುತ್ತೇನೆ. ಜತೆಗೆ ರಾಜ್ಯದಲ್ಲಿ ಅಮುಲ್‌ ಹಾಲು ಖರೀದಿಸದಂತೆ ಆದೇಶಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರಕಾರ ಮುಸ್ಲಿಮರ ಶೇ.4 ಮೀಸಲಾತಿಯನ್ನು ರದ್ದುಗೊಳಿಸಿ, ಅದನ್ನು ಒಕ್ಕಲಿಗರು ಮತ್ತು ಲಿಂಗಾಯತರಿಗೆ ಹಂಚಿದೆ. ಈ ಹಂಚಿಕೆ ಲಿಂಗಾಯತರು ಮತ್ತು ಒಕ್ಕಲಿಗರ ಬೇಡಿಕೆಯಾಗಿತ್ತಾ? ನಾನು ಮುಖ್ಯಮಂತ್ರಿಯಾದರೆ ಮುಸ್ಲಿಮರ ಮೀಸಲಾತಿಯನ್ನು ವಾಪಸ್‌ ತರುತ್ತೇನೆ. ಮಾತ್ರವಲ್ಲದೆ, ಒಕ್ಕಲಿಗರು ಹಾಗೂ ಲಿಂಗಾಯತರಿಗೂ ತೊಂದರೆಯಾಗದಂತೆ ನೋಡಿಕೊಳ್ಳುತ್ತೇನೆ ಎಂದಿದ್ದಾರೆ.

 

 

 

 

Scroll to Top