ಪಕ್ಷದ ಮುಖಂಡನ ಕಾರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು..! ➤ ರಮೇಶ್‌ಗೆ ಧೈರ್ಯ ತುಂಬಿ ಕಣ್ಣೀರಿಟ್ಟ ಜೆಡಿಎಸ್ ಅಭ್ಯರ್ಥಿ ಎಂ.ಆರ್ ಮಂಜುನಾಥ್ .!  

(ನ್ಯೂಸ್ ಕಡಬ)Newskadaba.com ಚಾಮರಾಜನಗರ,ಏ.23 ಕೆಲ ತಿಂಗಳುಗಳ ಹಿಂದೆಯಷ್ಟೇ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದ ಮುಖಂಡನ ಕಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ತೆಳ್ಳನೂರು ಗ್ರಾಮದಲ್ಲಿ ನಡೆದಿದೆ.

ರಮೇಶ್ ಅವರು ನಿಲ್ಲಿಸಿದ ಕಾರಿಗೆ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ರಮೇಶ್ ಅವರ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಅಭ್ಯರ್ಥಿ ಎಂ.ಆರ್.ಮಂಜುನಾಥ್ ಭೇಟಿ ಕೊಟ್ಟು ಕಾರಿನ ಸ್ಥಿತಿ ಕಂಡು ಕಣ್ಣೀರು ಹಾಕಿದ್ದು, ಬೆಂಕಿ ಇಟ್ಟವರು ಸಿಕ್ಕಿ ಹಾಕಿಕೊಳ್ಳುತ್ತಾರೆ ಎಂದು ಮುಖಂಡನಿಗೆ ರಮೇಶ್‌ಗೆ ಧೈರ್ಯ ತುಂಬಿ ಕಣ್ಣೀರು ಹಾಕಿದ್ದಾರೆ.

Also Read  ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಶಕ್ತಿ ಶಿಕ್ಷಣ ಸಂಸ್ಥೆಯಿಂದ ನಿಧಿ ಸಮರ್ಪಣೆ

 

 

 

error: Content is protected !!
Scroll to Top