‘ಬಿಜೆಪಿ ನಾಯಕರ್‍ಯಾರು ಜಾತಿ ರಾಜಕಾರಣ ಮಾಡಲ್ಲ’ ➤ ಕಾಂಗ್ರೆಸ್ ವಿರುದ್ದ ಈಶ್ವರಪ್ಪ ವಾಗ್ದಾಳಿ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಏ.23. ಲಿಂಗಾಯತ ಸಮಾಜಕ್ಕೆ ಕಾಂಗ್ರೆಸ್ ಮಾಡಿದ್ದಷ್ಟು ದ್ರೋಹ ಯಾರು ಮಾಡಿಲ್ಲ. ನಮ್ಮ ಬಿಜೆಪಿ ನಾಯಕರು ಯಾರು ಜಾತಿ ರಾಜಕಾರಣ ಮಾಡಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.


ಸಿದ್ದರಾಮಯ್ಯ ಲಿಂಗಾಯತ ಸಮುದಾಯದ ಬಗ್ಗೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಲಿಂಗಾಯತ ಸಮಾಜಕ್ಕೆ ಕಾಂಗ್ರೆಸ್ ಪಕ್ಷ ಮಾಡಿದ್ದಷ್ಟು ದ್ರೋಹ ಯಾರು ಮಾಡಿಲ್ಲ. ಲಿಂಗಾಯತರಿಗೆ ಮಾಡಿದ ದ್ರೋಹದಿಂದಾಗಿ ಅವರ ಸರ್ಕಾರ ಕಳೆದುಕೊಂಡಿದ್ದಾರೆ ಎಂದರು.

error: Content is protected !!

Join the Group

Join WhatsApp Group