ರೈಲಿನ ಶೌಚಾಲಯದಲ್ಲಿ ಮೃತಪಟ್ಟ ವ್ಯಕ್ತಿ.!   ➤24 ಗಂಟೆ ಮೃತದೇಹ ಶೌಚಾಲಯದಲ್ಲೇ ಬಾಕಿ..!

(ನ್ಯೂಸ್ ಕಡಬ)Newskadaba.com ಮಂಗಳೂರು,ಏ.25 ಮುಂಬಯಿ- ಮಂಗಳೂರು ರೈಲಿನಲ್ಲಿ ಊರಿಗೆ ಮರಳುತ್ತಿದ್ದ ವ್ಯಕ್ತಿ ರೈಲಿನ ಶೌಚಾಲಯದಲ್ಲೇ ಮೃತಪಟ್ಟು ರೈಲಿನ ಸಿಬಂದಿಯ ಗಮನಕ್ಕೇ ಬಾರದೆ ಮೃತದೇಹವು ಮತ್ತೆ ಅದೇ ರೈಲಿನಲ್ಲಿ ಮುಂಬಯಿಗೆ ಹೋದ ಹೃದಯ ಕಲಕುವ ವಿದ್ಯಮಾನ ಘಟಿಸಿದೆ.

ಇಲ್ಲಿನ ಕಿನ್ನಿಗೋಳಿಯ ಮೆನ್ನ ಬೆಟ್ಟಿ ನವರಾದ ಮೋಹನ್‌ ಬಂಗೇರ (56) ಅವರು ಮುಂಬಯಿಯಿಂದ ಊರಿಗೆ ಮರಳುವ ವೇಳೆಗೆ ಹೃದ ಯಾಘಾತದಿಂದ ಮೃತಪಟ್ಟಿದ್ದು ವಿಷಯ ಗೊತ್ತಾಗದೆ ಅವರ ಕುಟುಂಬಿಕರು ಮುಂಬಯಿ ವರೆಗೂ ಹುಡುಕಾಡಿದ್ದಾರೆ.

ಮಾಡಬೇಕಿದ್ದ ರೈಲು ಸಿಬಂದಿ ಕರ್ತವ್ಯಲೋಪ ಮಾಡಿದ್ದಲ್ಲದೆ ತಾವು ತಪಾಸಣೆ ಮಾಡಿದ್ದಾಗಿ ವರದಿ ಕೊಟ್ಟಿ ರುವುದು ನೋವು ತಂದಿದೆ. ಆದರೆ ಅವರಿದ್ದ ಬೋಗಿಯ ಶೌಚಾಲಯ ಸಹಿತ ತಪಾಸಣೆ ಕೊಳೆತ ಶರೀರಮೃತದೇಹವನ್ನು ರೈಲಿನಲ್ಲೇ ಮತ್ತೆ ಹಿಂದೆ ಕಳುಹಿಸಲು, ಮರಣೋತ್ತರ ಪರೀಕ್ಷೆಗೆ 10 ಸಾವಿರ ರೂ.ಗಳನ್ನು ಪಾವತಿಸಿದ್ದು ಏಜೆನ್ಸಿಯೊಂದು ಪ್ಯಾಕ್‌ ಮಾಡಿ ಕಳಿಸಿದೆ.

Also Read  ಕಬ್ಬಿನ ತೂಕದಲ್ಲಿ ವಂಚನೆ  ➤ ಕಾರ್ಖಾನೆಗಳ ಮೇಲೆ ಅಧಿಕಾರಿಗಳಿಂದ ದಾಳಿ  

 

 

 

error: Content is protected !!
Scroll to Top