ಬಂಟ್ವಾಳ: ವಾಟ್ಸಪ್ ನಲ್ಲಿ ಕೋಮು ಪ್ರಚೋದಕ ಮೆಸೇಜ್ ಶೇರ್ ಮಾಡಿದ ಪ್ರಕರಣ ► ಗ್ರೂಪ್ ಅಡ್ಮಿನ್ ಸೇರಿ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.13. ವಾಟ್ಸ್‌ಆ್ಯಪ್‌ ಗ್ರೂಪೊಂದರಲ್ಲಿ ಧರ್ಮನಿಂದನೆ, ಮಹಿಳೆಯ ಅವಹೇಳನ ಹಾಗೂ ಕೋಮುದ್ವೇಷ ಕೆರಳಿಸುವ ಸಂದೇಶ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ವಾಟ್ಸಪ್ ಗ್ರೂಪೊಂದರಲ್ಲಿ ಕೋಮುದ್ವೇಷ ಕೆರಳಿಸುವ ಹಾಗೂ ಮಹಿಳೆಯೋರ್ವರನ್ನು ಕೀಳು ಮಟ್ಟದಲ್ಲಿ ನಿಂದಿಸುವ ಮತ್ತು ಆಕ್ರಮಣಕಾರಿಯಾದ ಸಂದೇಶವನ್ನು ಹಾಕಿದ ಆರೋಪಿ ಕೆಎಸ್ಸಾರ್ಟಿಸಿ ಬಸ್‌ ಚಾಲಕ ಉಪ್ಪಿನಂಗಡಿಯ ಬಾಲಕೃಷ್ಣ ಪೂಜಾರಿ (48) ಹಾಗೂ ಗ್ರೂಪ್ ಅಡ್ಮಿನ್ ಬಂಟ್ವಾಳದ ಇರಾ ಗ್ರಾಮದ ಸತೀಶ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಪೂಜಾರಿ ಸಂದೇಶವನ್ನು ಹರಿಯಬಿಟ್ಟಿದ್ದು, ಸತೀಶ್ ವಾಟ್ಸ್‌ಆ್ಯಪ್ ಗ್ರೂಪಿನ ಅಡ್ಮಿನ್ ಆಗಿದ್ದು, ಈತನ ಮೇಲೂ ಕ್ರಮ ಜರಗಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.

Also Read    ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವೀಧರರಿ0ದ► ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಗೆ ಅರ್ಜಿ ಆಹ್ವಾನ

error: Content is protected !!
Scroll to Top