‘ಮೋದಿಯನ್ನು ಟೀಕಿಸಿದವರು ಯಾರೂ ಉದ್ಧಾರವಾಗಿಲ್ಲ’       ➤ ಖರ್ಗೆಗೆ ಈಶ್ವರಪ್ಪ ತಿರುಗೇಟು

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಏ.28. ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಮೆಚ್ಚಿಸಿ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿದ್ದಾರೆ.

ಖರ್ಗೆಯವರಿಗಿಂತ ಕೆಟ್ಟ ಭಾಷೆಯಲ್ಲಿ ಟೀಕಿಸಬಲ್ಲೆ. ಆದರೆ ಆ ಕೆಲಸ ಮಾಡಲ್ಲ. ಖರ್ಗೆಯವರಿಗೆ ಒಂದು ತೂಕವಿತ್ತು. ಅದಕ್ಕೆ‌ ಎಐಸಿಸಿ ಅಧ್ಯಕ್ಷರಾದರೂ. ಆದರೆ ಈಗ ಏನಾಗಲು ಹೊರಟಿದ್ದಾರೋ ಗೊತ್ತಿಲ್ಲ. ನರೇಂದ್ರ ಮೋದಿ ಅವರನ್ನು ಟೀಕಿಸಿದವರು ಯಾರೂ ಉದ್ಧಾರವಾಗಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ ತಿರುಗೇಟು ನೀಡಿದ್ದಾರೆ.

Scroll to Top