(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.28 ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರಗಳ ಪರ್ವವೇ ನಡೆಯಲು ಆರಂಭಿಸಿತು. ಬಿಜೆಪಿಯನ್ನು ತೊರೆದು ಶೆಟ್ಟರ್ ಕಾಂಗ್ರೇಸ್ ಕೈ ಹಿಡಿದರು. ಲಕ್ಷ್ಮಣ ಸವದಿ ಸಹ ಬಿಜೆಪಿ ಬಿಟ್ಟು ಕಾಂಗ್ರೇಸ್ ಸೇರಿಕೊಂಡರು. ಕೈ ಸೇರಿಕೊಂಡ ಶೆಟ್ಟರ್ ಅವರನ್ನು ಬಿಜೆಪಿ ಪಕ್ಷ ಎಂದಿಗೂ ಕ್ಷಮಿಸುವುದಿಲ್ಲ, ನಂಬಿಕೆ ದ್ರೋಹಿ ಎಂದೆಲ್ಲಾ ಆರೋಪಿಸಿ ಅವರ ವಿರುದ್ಧ ಗೆಲ್ಲುವ ಹುಮ್ಮಸ್ಸಿನಲ್ಲಿದ್ದಾರೆ.
ಇದಲ್ಲದೇ ಶೆಟ್ಟರ್ ಸಹ ಬಿಜೆಪಿ ಲಿಂಗಾಯತ ವಿರೋಧಿ ಎಂದು ಆರೋಪಿಸಿದ್ದಾರೆ. ಈ ಆರೋಪದಿಂದ ಬಿಜೆಪಿ ನಿರ್ಣಾಯಕ ಮತದಿಂದ ಶೆಟ್ಟರ್ ವಿರುಧ್ಧ ಗೆಲ್ಲುವುದು ಒಂದು ದೊಡ್ಡ ಸವಾಲು.ಕೆಲವು ದಿನಗಳ ಹಿಂದೆ ಕಿಚ್ಚ ಸುದೀಪ್ ತಾನು ಬಿಜೆಪಿ ಪಕ್ಷದ ಪರವಾಗಿ ಪ್ರಚಾರಕ್ಕೆ ಇಳಿಯವುದಾಗಿ ಹೇಳಿದ್ದರು.