ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.29. ಕಾಲೇಜಿನಲ್ಲಿಯೇ ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ.

ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದು, ಕಾಲೇಜು ಪೆಸ್ಟ್ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಭಾಸ್ಕರ್​ಗೆ ಇನ್ನೊಂದು ಗುಂಪು ಚಾಕುವಿನಿಂದ ಇರಿದಿದ್ದು, ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದ್ದು, ಈ ಕುರಿತು ಪೊಲೀಸರು ಕಾಲೇಜು ಸಿಸಿಟಿವಿ ಪರಿಶೀಲಿಸುತ್ತಿದ್ದಾರೆ.

Also Read  2024-25ನೇ ಹಣಕಾಸು ವರ್ಷದ ಮೋದಿ 3.0 ಸರ್ಕಾರದ ಬಜೆಟ್ ಮಂಡನೆ

.

error: Content is protected !!
Scroll to Top