ಪುತ್ತೂರಿನ ಯುವತಿ ವಿಷ ಸೇವಿಸಿ ಬೆಂಗಳೂರಿನಲ್ಲಿ ಆತ್ಮಹತ್ಯೆ..!​

(ನ್ಯೂಸ್ ಕಡಬ)Newskadaba.com ಪುತ್ತೂರು,ಮೇ.03 ಪುತ್ತೂರಿನ ಯುವತಿಯೋರ್ವರು ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಕೆಯ್ಯೂರು ಗ್ರಾಮದ ಮಾಡಾವು ಸ್ಥಾನತ್ತಾರು ಚಂದ್ರಶೇಖರ ರೈ ಮತ್ತು ಆಶಾ ಕಾರ್ಯಕರ್ತೆ ಸೋಮಾವತಿ ರೈ ದಂಪತಿಯ ಪುತ್ರಿ ಶ್ರುತಿ ಸಿ.ರೈ(22)ಮೃತಪಟ್ಟವರು.ಬೆಂಗಳೂರುನಲ್ಲಿ ಆನಿಮೇಷನ್ ಶಿಕ್ಷಣ ಪಡೆಯುತ್ತಿದ್ದ ಶ್ರುತಿ ಕೋರ್ಸ್ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿದ್ದರು.

ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು,ವಿಷಯ ತಿಳಿದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತದೇಹವನ್ನು ಹುಟ್ಟೂರಿಗೆ  ತಂದು ಅಂತ್ಯಸಂಸ್ಕಾರ ನಡೆಸಲಾಗಿದೆ.

 

 

 

Scroll to Top