ಶಾಲೆಯೊಳಗೆ ನುಗ್ಗಿ ಕಳ್ಳತನಕ್ಕೆಯತ್ನಿಸುತ್ತಿದ್ದ ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು.!‌

(ನ್ಯೂಸ್ ಕಡಬ)Newskadaba.com ಬೆಳ್ತಂಗಡಿ,ಮೇ..03 ಶಾಲೆಯೊಳಗೆ ನುಗ್ಗಿ ಇನ್ವಾರ್ಟರ್ ಹಾಗೂ ಕಂಪ್ಯೂಟರ್ ಕದಿಯಲು ಯತ್ನಿಸುತ್ತಿದ್ದ ಕಳ್ಳರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.ಧರ್ಮಸ್ಥಳ ಸಮೀಪದ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಬಂದಾರಿನಲ್ಲಿ ಘಟನೆ ನಡೆದಿದೆ.

ಶಾಲೆಗೆ ಮಧ್ಯರಾತ್ರಿ ಸುಮಾರಿಗೆ 4 ಜನ ಕಳ್ಳರು ನುಗ್ಗಿದ್ದಾರೆ.ಇದನ್ನು ಗಮನಿಸಿದ ಸ್ಥಳೀಯರು ಶಾಲೆಗೆ ತೆರಳಿ ಕಳ್ಳರನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿ, ಬಳಿಕ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

 

Scroll to Top