ಮಂಡ್ಯದಲ್ಲಿ ತನ್ನ ಸ್ಥಾನ ಉಳಿಸಿಕೊಳ್ಳಲು ಜೆಡಿಎಸ್‌ ಹರಸಾಹಸ..!

(ನ್ಯೂಸ್ ಕಡಬ)Newskadaba.com ಮಂಡ್ಯ,ಮೇ.04 ಮಂಡ್ಯ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ  ಹೊಂದಿದ್ದ ತನ್ನ ಹಿಡಿತವನ್ನು ಮತ್ತೆ ಗಟ್ಟಿಗೊಳಿಸಲು ಜೆಡಿಎಸ್ ತೀವ್ರವಾಗಿ ಕಸರತ್ತು ಮಾಡುತ್ತಿದೆ.2018ರಲ್ಲಿ ಮಂಡ್ಯ ಲೋಕಸಭೆ ವ್ಯಾಪ್ತಿಗೆ ಬರುವ ಎಲ್ಲ ಎಂಟು ಕ್ಷೇತ್ರಗಳಲ್ಲಿ ಜೆಡಿಎಸ್‌ ಗೆಲುವು ಸಾಧಿಸಿತ್ತು.

2019ರ ಉಪಚುನಾವಣೆಯಲ್ಲಿ ಜೆಡಿಎಸ್ ಗೆದ್ದಿದ್ದ ಎಂಟು ಸ್ಥಾನಗಳ ಪೈಕಿ ಕೆಆರ್ ಪೇಟೆಯನ್ನು ಬಿಜೆಪಿಗೆ ಕಳೆದುಕೊಂಡಿತ್ತು. ಇದೀಗ ಕೆಆರ್‌ಪೇಟೆ ಜತೆಗೆ ಜೆಡಿಎಸ್‌ಗೆ ಸವಾಲು ಎದುರಾಗಿರುವ ಇನ್ನೂ ಕೆಲವು ಕ್ಷೇತ್ರಗಳಲ್ಲಿ ಸ್ಥಾನ ಉಳಿಸಿಕೊಳ್ಳಲು ಜೆಡಿಎಸ್‌ ಹರಸಾಹಸ ಪಡುತ್ತಿದೆ.

 

Scroll to Top