ವಿಜಯಪುರ ರೌಡಿಶೀಟರ್ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com.ವಿಜಯಪುರ , ಮೇ.6. ರೌಡಿಶೀಟರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ನಗರದಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಗುಂಡಿನ ದಾಳಿಯಲ್ಲಿ ರೌಡಿಶೀಟರ್​ ಸಾವನ್ನಪ್ಪಿದ್ದಾನೆ. ನಗರದ ಚಾಂದಪುರ ಕಾಲೋನಿಯಲ್ಲಿ ಘಟನೆ ನಡೆದಿದೆ.

ರೌಡಿಶೀಟರ್​ ಹೈದರ್ ಅಲಿ ನದಾಫ್ಮೇ ಲೆ ಫೈರಿಂಗ್ ನಡೆದಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಹತ್ಯೆ ಮಾಡಿರುವ ದುಷ್ಕರ್ಮಿಗಳು ಸ್ಥಳದಿಂದ ಪರಾರಿ ಆಗಿದ್ದಾರೆ. ಮೃತ ಹೈದರ್​ ಅಲಿ ನಧಾಪ್ ಪತ್ನಿ ನಿಶಾತ್ ನದಾಫ್ ಅವರು ಪಾಲಿಕೆ ಸದಸ್ಯೆ ಆಗಿದ್ದಾರೆ. ಘಟನೆಯಿಂದ ಜನರು ಬೆಚ್ಚಿಬಿದ್ದಿದ್ದಾರೆ.  ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಜಲನಗರ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!

Join the Group

Join WhatsApp Group