ನಟ ಸುದೀಪ್​ಗೆ ಬೆದರಿಕೆ ಪತ್ರ ಪ್ರಕರಣ: ನಿರ್ದೇಶಕ ರಮೇಶ್ ಕಿಟ್ಟಿ ಅರೆಸ್ಟ್

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮೇ.6. ನಟ ಸುದೀಪ್​ಗೆ ಬೆದರಿಕೆ ಪತ್ರಗಳನ್ನು ಕಳುಹಿಸಿ ಬೆದರಿಕೆಯೊಡ್ಡಿದ ಪ್ರಕರಣದಲ್ಲಿ ನಿರ್ದೇಶಕ ರಮೇಶ್ ಕಿಟ್ಟಿ ಎಂಬುವವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕೆಲ ಕಾಲ ಸುದೀಪ್ ಆಪ್ತವಲಯದಲ್ಲಿದ್ದ ಆರೋಪಿ, ಕಿಚ್ಚ ಸುದೀಪ್ ಚಾರಿಟಬಲ್‌ ಟ್ರಸ್ಟ್ ಅಧ್ಯಕ್ಷನಾಗಿಯೂ ಕೆಲಸ ನಿರ್ವಹಿಸಿದ್ದರು. ಆದರೆ, ನಂತರದ ದಿನಗಳಲ್ಲಿ ಹಣಕಾಸು ವಿಚಾರವಾಗಿ ಅವರಿಬ್ಬರ ಮಧ್ಯೆ ವೈಷಮ್ಯ ಉಂಟಾಗಿತ್ತು.

ಈ ಕಾರಣಕ್ಕೆ ದೂರವಾಗಿದ್ದ ರಮೇಶ್​​, ಸುದೀಪ್ ಅವರಿಗೆ ಬೆದರಿಕೆ ಪತ್ರ ಕಳುಹಿಸಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಪ್ರಕರಣದ ತನಿಖೆ ಆರಂಭಿಸಿದ ಸಿಸಿಬಿ ಪೊಲೀಸರಿಗೆ ಆರೋಪಿ ರಮೇಶ್ ಕಿಟ್ಟಿ ಈ ಕೃತ್ಯ ಎಸಗಿರುವುದರ ಕುರಿತು ಪುರಾವೆಗಳು ಸಿಗುತ್ತಿದ್ದಂತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ವಿಚಾರಣೆಗೆ ಹಾಜರಾಗಿದ್ದ ಅವರನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

error: Content is protected !!

Join the Group

Join WhatsApp Group