ನಾಪತ್ತೆಯಾಗಿದ್ದ ಸುಳ್ಯದ ಯುವಕನ ಮೃತದೇಹ ನದಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಮೇ.08. ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಹೊಳೆಗೆ ಸ್ನೇಹಿತರೊಂದಿಗೆ ಜಲ ಕ್ರೀಡೆಯಾಡಲೆಂದು ಹೋಗಿ ನಾಪತ್ತೆಯಾಗಿದ್ದ ಸುಳ್ಯದ ಯುವಕನ ಮೃತದೇಹ ಪತ್ತೆಯಾಗಿದೆ.


ಸುಳ್ಯದ ನಿವಾಸಿ ಸುಹಾಸ್ ಎಂ (21) ಮೃತ ಯುವಕ ಎಂದು ತಿಳಿದುಬಂದಿದೆ. ಸುಹಾಸ್ ಮೃತದೇಹ ಮುಳುಗಿದ ಸ್ಥಳದಿಂದ ಸುಮಾರು 200 ಮೀಟರ್ ದೂರದಲ್ಲಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಕೋಟ ಪೊಲೀಸರು ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

Also Read  ಕಾಸರಗೋಡು: ಆಟೋ ರಿಕ್ಷಾ ಮಗುಚಿ ಮಗು ಮೃತ್ಯು

error: Content is protected !!
Scroll to Top