ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಪುಂಡರ ಗ್ಯಾಂಗ್.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.10 ಪದ್ಮನಾಭನಗರ ಕ್ಷೇತ್ರದ ಪಾಪಯ್ಯ ಗಾರ್ಡನ್ 28, 29 ಬೂತ್ ಬಳಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ. ಗಾಂಜಾ ನಶೆಯಲ್ಲಿ ಬಂದಿದ್ದ ಸುಮಾರು 30 ಯುವಕರ ಗುಂಪು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಳಿ ನಡೆಸಲಾಗಿದೆ.

ಏಕಾಏಕಿ ದೊಣ್ಣೆಗಳ ಜೊತೆಯಲ್ಲಿ ನುಗ್ಗಿದ ಗ್ಯಾಂಗ್ ಮಹಿಳೆಯರ ಮೇಲೆಯೂ ಹಲ್ಲೆ ನಡೆಸಿದೆ. ಮಾಜಿ ಕಾರ್ಪೋರೇಟರ್ ಲಕ್ಷ್ಮೀ ಅವರ ಪತಿ ಕಬ್ಬಳ್ ಉಮೇಶ್ ಹುಡುಗರನ್ನು ಕರೆಸಿ ದಾಳಿ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಮೀನಮ್ಮ ಮತ್ತು ಚನ್ನಪ್ಪ ಎಂಬವರು ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ಸಲ್ಲಿಸಿದ್ದಾರೆ.

Also Read  ನಿಯಂತ್ರಣ ತಪ್ಪಿ ಮಿನಿ ಲಾರಿ ಡಿವೈಡರ್ ಗೆ ಡಿಕ್ಕಿ.!➤ ತಾಯಿ-ಮಗ ಸ್ಥಳದಲ್ಲೇ ಮೃತ್ಯು

 

 

error: Content is protected !!
Scroll to Top