ಪ್ರೇಕ್ಷಾ ಆತ್ಮಹತ್ಯೆ ಪ್ರಚೋದನೆ ಆರೋಪ ಎದುರಿಸುತ್ತಿದ್ದ ಯುವಕ ಸೂಸೈಡ್

(ನ್ಯೂಸ್ ಕಡಬ)newskadaba.com ಉಳ್ಳಾಲ, ಮೇ.11. ಎರಡು ವರುಷಗಳ ಹಿಂದೆ ಕುಂಪಲದ ಆಶ್ರಯ ಕಾಲನಿಯ ಮನೆಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ರೂಪದರ್ಶಿ ಪ್ರೇಕ್ಷ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ ಎಂದು ತಿಳಿದುಬಂದಿದೆ.


ಕುತ್ತಾರು, ಮುಂಡೋಳಿ ನಿವಾಸಿ ಯತಿರಾಜ್ ಗಟ್ಟಿ(20)ಆತ್ಮ ಹತ್ಯೆಗೈದ ಯುವಕ. ಯತಿರಾಜ್ ತನ್ನ ಮನೆಯ ಹಿಂದಿನ ಚಿಕ್ಕಮ್ಮನ ಮನೆಯ ಎದುರಿನ ಸಿಟ್ ಔಟ್ನ ಕಬ್ಬಿಣದ ಹುಕ್ಸ್ ಒಂದಕ್ಕೆ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದಾನೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

 

Scroll to Top