ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ.!➤ಮೂವರು ಅಧಿಕಾರಿಗಳ ವಿರುದ್ಧ FIR  ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.19 ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿರುವ ಆರೋಪ ವ್ಯಕ್ತವಾಗಿದ್ದು, ನಿಗಮದ ಮೂವರು ಅಧಿಕಾರಿಗಳ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಗಮದ ವ್ಯವಸ್ಥಾಪಕ ನಿರ್ದೇಶಕ ಪಿ.ನಾಗೇಶ್ ಅವರು ಅಕ್ರಮದ ಬಗ್ಗೆ ದೂರು ನೀಡಿದ್ದಾರೆ. ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಸುರೇಶ್, ಹಿಂದಿನ ಮುಖ್ಯ ಪ್ರಧಾನ ವ್ಯವಸ್ಥಾಪಕ ಪ್ರಕಾಶ್ ಎಂ. ಹರಗಾಪುರೆ ಹಾಗೂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆರ್‌.ಟಿ. ಸೀತಾರಾಮ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

Also Read  ದ.ಕ. ಜಿಲ್ಲೆಯಲ್ಲಿ ಅಡಿಕೆ ಬೆಳೆಗಳ ರೋಗ ನಿಯಂತ್ರಣಕ್ಕೆ ತುರ್ತು ಸ್ಪಂದನೆ ಕೋರಿ ಕೇಂದ್ರ ಕೃಷಿ ಸಚಿವರಿಗೆ ಕ್ಯಾ. ಚೌಟ ಪತ್ರ

 

error: Content is protected !!
Scroll to Top