ಕಡಬ: ಪ್ರವಾಸಿ ಮಂದಿರದ ಬಳಿ ಸುಬ್ರಹ್ಮಣ್ಯ ನಿವಾಸಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕಡಬ, ಮೇ.20. ಕುಲ್ಕುಂದ ನಿವಾಸಿಯೊಬ್ಬರು ಕಡಬದ ಹಳೆ ಪ್ರವಾಸಿ ಮಂದಿರದ ಬಳಿ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ.


ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಕಾಲೋನಿ ನಿವಾಸಿ ನರಸಿಂಹ(60)ಮೃತಪಟ್ಟವರರು ಎಂದು ಗುರುತಿಸಲಾಗಿದೆ. ಐನೆಕಿದು ಸೊಸೈಟಿಯಲ್ಲಿ ಗುಮಾಸ್ತರಾಗಿದ್ದ ಇವರು ಪಾರ್ಶ್ವವಾಯು ಪೀಡಿತರಾಗಿ ಮನೆಯಲ್ಲೇ ಇದ್ದರು. ಮೂರ್ಛೆ ರೋಗದ ಮಾತ್ರೆಯನ್ನು ಸೇವಿಸುತ್ತಿದ್ದರು. ಇದರ ಜೊತೆಗೆ ಕುಡಿತದ ಚಟವನ್ನು ಹೊಂದಿದ್ದರು ಎನ್ನಲಾಗಿದೆ.

Scroll to Top