ಮಂಗಳೂರು ವಿಮಾನ ದುರಂತ; ಜಿಲ್ಲಾಡಳಿತದಿಂದ ಶ್ರದ್ದಾಂಜಲಿ                

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.22. ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ 13 ವರ್ಷಗಳ ಹಿಂದೆ ಸಂಭವಿಸಿದ ವಿಮಾನ ದುರಂತದಲ್ಲಿ ಅಗಲಿದವರ ಸ್ಮರಣಾರ್ಥ ಜಿಲ್ಲಾಡಳಿತದಿಂದ ತಣ್ಣೀರುಬಾವಿಯ ಹುತಾತ್ಮರ ಸ್ಮಾರಕದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಹಲವು ಅಧಿಕಾರಿಗಳು ಪುಷ್ಪ ನಮನ ಸಲ್ಲಿಸಿದರು.

 

Scroll to Top