ಉಡುಪಿ:ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ತಂದೆ ಕಾಲು ಜಾರಿ ಬಿದ್ದು ಮೃತ್ಯು

 (ನ್ಯೂಸ್ ಕಡಬ) newskadaba.com. ಉಡುಪಿ, ಮೇ.24. ಮುಂಬೈಯಿಂದ ಮಗಳ ಮದುವೆ ಕಾರ್ಯಕ್ಕೆಂದು ಬಂದ ವ್ಯಕ್ತಿಯೊಬ್ಬರು ಹೊಟೇಲಿನಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಈ ಘಟನೆ ನಡೆದಿದ್ದು ಮೃತ ವ್ಯಕ್ತಿಯನ್ನು ದೊಂಬಿವಿಲಿಯ ರಾಮಕೃಷ್ಣ ಮುದ್ದು ಶೆಟ್ಟಿ (68) ಎಂದು ಗುರುತಿಸಲಾಗಿದೆ. ಮೇ22ಕ್ಕೆ ಇವರ ಎರಡನೇ ಮಗಳಿಗೆ ಉಡುಪಿ ಶ್ಯಾಮಿಲಿ ಸಭಾಭವನದಲ್ಲಿ ಮದುವೆ ನಿಶ್ಚಯವಾಗಿದ್ದು,  ಈ ಸಂದರ್ಭದಲ್ಲಿ  ಮೇ19ರಂದು ಇಡೀ ಕುಟುಂಬ ಸಮೇತರಾಗಿ ಬಂದು ಉಡುಪಿಯ ಹೊಟೋಲ್‌ನಲ್ಲಿ  ಉಳಿದಿದ್ದರು, ಹೊಟೇಲ್ ರೂಮ್ ಒಳಗಡೆ ನಡೆಯುವಾಗ ಆಕಸ್ಮಿಕವಾಗಿ ತುಂಡಾದ ಕಾಲಿಗೆ ಅಳವಡಿಸಿದ ಬೆಲ್ಟ್ ಜಾರಿ ನೆಲಕ್ಕೆ ಬಿದ್ದಿದರಿಂದ  ತಲೆಗೆ ತೀವ್ರವಾಗಿ ಗಾಯಗೊಂಡ ಇವರು ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ.

Scroll to Top