ಜಮ್ಮು ಕಾಶ್ಮೀರದಲ್ಲಿ ರಸ್ತೆ ಅಪಘಾತ ➤ ಏಳು ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಶ್ರೀನಗರ, ಮೇ.24. ಪಾಕಲ್ ದುಲ್ ಪ್ರಾಜೆಕ್ಟ್‌ನ ಕ್ರೂಸರ್ ವಾಹನವು ಜಮ್ಮು-ಕಾಶ್ಮೀರದ ಕಿಶ್ತ್‌ವಾರ್‌ನಲ್ಲಿ ಅಪಘಾತಕ್ಕೀಡಾಗಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ದಂಗದೂರು ಅಣೆಕಟ್ಟು ಸಮೀಪ ನಡೆದಿದೆ.


ಓರ್ವ ಗಂಭೀರ ಗಾಯಗೊಂಡಿದ್ದು, ಗಾಯಾಳನ್ನು ಕಿಶ್ತ್ವಾ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಕಿಶ್ತ್ವಾರ್ ಉಪ ಆಯುಕ್ತ ಡಾ.ದೇವಾಂಶ್ ಯಾದವ್ ತಿಳಿಸಿದ್ದಾರೆ. ಇನ್ನು ಕೇಂದ್ರ ವಿಜ್ಞಾನ ಹಾಗೂ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ರಸ್ತೆ ಅಪಘಾತದ ಬಗ್ಗೆ ಡಿಸಿ ಯಾದವ್ ಅವರೊಂದಿಗೆ ಮಾತನಾಡಿದರು.

error: Content is protected !!

Join the Group

Join WhatsApp Group