ಮಂಗಳೂರು: ಅಕ್ರಮ ಗಾಂಜಾ ಸಾಗಾಟ ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.30. ಮಂಗಳೂರು ಮತ್ತು ಕೇರಳಕ್ಕೆ ಆಂಧ್ರ ಪ್ರದೇಶದಿಂದ ನಿಷೇಧಿತ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಬಂಧಿತನಿಂದ ಸುಮಾರು 23 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.


ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ ಮೊಯಿದ್ದೀನ್ ಶಬೀರ್ (35) ಎಂದು ಗುರುತಿಸಲಾಗಿದೆ. ಇನ್ನು ಆರೋಪಿ ಶಬೀರ್ ವಿಶಾಖಪಟ್ಟಣದಿಂದ ಕಾರಿನ ಮೂಲಕ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದಾಗ ಉಳ್ಳಾಲ ಮುಡಿಪು ಕಾಯಿರಗೋಳಿ ಎಂಬಲ್ಲಿ ಸಿಸಿಬಿ ಪೊಲೀಸರ ತಂಡ ಸೆರೆ ಹಿಡಿದಿದೆ ಎಂದು ವರದಿಯಾಗಿದೆ.

Also Read  ಗೃಹಲಕ್ಷ್ಮೀ ಯೋಜನೆಗೆ ಸರ್ವರ್ ಡೌನ್- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5,621 ಅರ್ಜಿ ಸಲ್ಲಿಕೆ

error: Content is protected !!
Scroll to Top