ಇಚಿಲಂಪಾಡಿ – ಪೆರಿಯಶಾಂತಿ ಹೆದ್ದಾರಿ ಕಾಮಗಾರಿ ಹಿನ್ನೆಲೆ ➤ ಇಂದು (ಜೂ.07) ಧರ್ಮಸ್ಥಳ – ಸುಬ್ರಹ್ಮಣ್ಯ ಸಂಚಾರದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.07. ಲೋಕೋಪಯೋಗಿ ಇಲಾಖೆಯ ಸುಬ್ರಹ್ಮಣ್ಯ ಉಡುಪಿ ರಾಜ್ಯ ಹೆದ್ದಾರಿ 37ರ ಇಚ್ಲಂಪಾಡಿ ಹಾಗೂ ಪೆರಿಯಶಾಂತಿ ನಡುವೆ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ – ಸುಬ್ರಹ್ಮಣ್ಯ ರಸ್ತೆ ಸಂಚಾರದಲ್ಲಿ ತಡೆ ಇರಲಿದೆ.

ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಸಂಚರಿಸುವ ವಾಹನಗಳು ಗುಂಡ್ಯ ಮಾರ್ಗವಾಗಿ ಸಂಚರಿಸುವುದು ಹಾಗೂ ಸ್ಥಳೀಯ ವಾಹನ ಸವಾರರು ಲಾವತ್ತಡ್ಕ ರಸ್ತೆಯ ಮೂಲಕ ಸಂಚರಿಸುವಂತೆ ಲೋಕೋಪಯೋಗಿ ಇಲಾಖೆಯ ಪುತ್ತೂರು ಉಪ ವಿಭಾಗದ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group